Categories: ಮೈಸೂರು

ಇಂದು ಅರಮನೆ ಅಂಗಳದಲ್ಲಿ ಮಾಕ್‌ಡ್ರಿಲ್‌

ಮೈಸೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿರುವ ಬೆನ್ನಲ್ಲೇ ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಶನಿವಾರ(ಮೇ.10) ಸಂಜೆ ಅರಮನೆ ನಗರಿ ಮೈಸೂರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ.

ನಗರ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಕ್ ಡ್ರಿಲ್ ನಡೆಸುವ ಸಂಬಂಧ ಸಿದ್ಧತೆ ನಡೆಸಿದ್ದಾರೆ. ನಗರದ ಅರಮನೆ ಮುಂಭಾಗ ಶನಿವಾರ ಸಂಜೆ 5ರಿಂದ 7 ಗಂಟೆಯವರೆಗೆ ಮಾಕ್ ಡ್ರಿಲ್ ನಡೆಯಲಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಪೊಲೀಸ್ ಇಲಾಖೆ ಅಣಕು ಪ್ರದರ್ಶನ ನಡೆಸಲಿವೆ.

ಸುಮಾರು 2 ತಾಸುಗಳು ಮಾಕ್ ಡ್ರಿಲ್ ನಡೆಯಲಿದ್ದು, ಯುದ್ಧದ ಸಮಯದಲ್ಲಿ ಆಪತ್ತಿನ ಎಚ್ಚರಿಕೆ ಘಂಟೆ, ಅಗ್ನಿಶಾಮಕ ವಾಹನಗಳು, ಆಂಬ್ಯುಲೆನ್ಸ್‌ಗಳ ಸೈರನ್‌ಗಳು ಮೊಳಗುವುದು, ಅಗ್ನಿಶಾಮಕ ಸಿಬ್ಬಂದಿ, ಸಿವಿಲ್ ಡಿಫೆನ್ಸ್, ಗೃಹ ರಕ್ಷಕದಳದ ಸಿಬ್ಬಂದಿ ಹಾಗೂ ಪೊಲೀಸರು ಅಪಾಯದಲ್ಲಿ ಸಿಲುಕಿದ್ದ ನಾಗರಿಕರು, ಗಾಯಾಳುಗಳು ಹಾಗೂ ಕಟ್ಟಡದೊಳಗೆ ಸಿಲುಕಿದವರ ರಕ್ಷಣೆ ಕಾರ್ಯದಲ್ಲಿ ತೊಡಗುವುದನ್ನು ಸಾರ್ವಜನಿಕವಾಗಿ ಪ್ರರ್ದಶನವಾಗಲಿದೆ. ಈ ವೇಳೆ ಯುದ್ಧದ ಸೈರನ್ ಮೊಳಗಲಿದ್ದು, ಕೆಲ ಕಾಲ ವಿದ್ಯುತ್ ದೀಪ ಬಂದ್ ಆಗಲಿದೆ. ಇದು ಕೇವಲ ಅಣಕು ಪ್ರದರ್ಶನವಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

4 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

4 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

4 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

5 hours ago