ಮೈಸೂರು : ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳೋದು ಬಿಟ್ಟರೆ ಕೊಟ್ಟ ಮಾತನ್ನು ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿ ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರ ಪರ ಪ್ರಚಾರದ ವೇಳೆ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಹತ್ತು ವರ್ಷದಲ್ಲಿ ನರೇಂದ್ರ ಮೋದಿ ಅವರು ಬರೀ ಸುಳ್ಳು ಭರವಸೆ ನೀಡಿದ್ದಾರೆ ಹೊರತು ಕೊಟ್ಟ ಮಾತನ್ನು ನಡೆಸಿಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಬಡವರ, ಮಹಿಳೆಯರ, ರೈತರ, ಯುವಕರ, ದಲಿತ-ಹಿಂದುಳಿದ ಹಾಗೂ ಅಲ್ಪಸಂಖ್ಯಾತ, ಕಾರ್ಮಿಕರ ಸಮಸ್ಯೆಯಾಗಿರಬಹುದು ಯಾವುದನ್ನು ಒಂದು ವಿವಾರಕ್ಕೆ ಪರಿಹಾರ ನೀಡಿಲ್ಲ ಎಂದು ತಿಳಿಸಿದರು.
೨೦೧೫ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏನು ಹೇಳಿದ್ದರು ಮತ್ತು ೨೦೨೪ರಲ್ಲಿ ಅವರು ಏನು ಮಾಡಿದ್ದಾರೆ ಮತ್ತು ಏನು ಮಾಡಿಲ್ಲ ಎಂದು ಮತದಾರರರಾದ ನೀವು ಪರಿಶೀಲನೆ ಮಾಡಿ ಯಾರಿಗೆ ಅಧಿಕಾರ ನೀಡಬೇಕು, ಯಾಕೆ ನೀಡಬೇಕು ಎಂದು ತೀರ್ಮಾನ ಮಾಡಿ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…