ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು.
ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮಾತನಾಡಿದ ಅವರು ದೇಶವನ್ನು ಮುನ್ನಡೆಸಲು ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ. ಆದ್ದರಿಂದ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಪ್ರಧಾನಿ ಶ್ರಮಿಸುತ್ತಿದ್ದಾರೆ. ಜನಪರ ಮತ್ತು ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸನನ್ನೂ ಅವರು ಮಾಡಿದ್ದಾರೆ ಎಂದರು.
ಎಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ವಿ.ಶೈಲೇಂದ್ರ, ಮೈಸೂರು ನಗರ ಘಟಕದ ಉಪಾಧ್ಯಕ್ಷ ಜೋಗಿ ಮಂಜು, ಮುಖಂಡರಾದ ಪಾರ್ಥಸಾಥಿ, ರಮೇಶ್, ಜಗದೀಶ್ ಸೇರಿದಂತೆ ಮುಖಂಡರು ಇದ್ದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…