ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು.
ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮಾತನಾಡಿದ ಅವರು ದೇಶವನ್ನು ಮುನ್ನಡೆಸಲು ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ. ಆದ್ದರಿಂದ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಪ್ರಧಾನಿ ಶ್ರಮಿಸುತ್ತಿದ್ದಾರೆ. ಜನಪರ ಮತ್ತು ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸನನ್ನೂ ಅವರು ಮಾಡಿದ್ದಾರೆ ಎಂದರು.
ಎಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ವಿ.ಶೈಲೇಂದ್ರ, ಮೈಸೂರು ನಗರ ಘಟಕದ ಉಪಾಧ್ಯಕ್ಷ ಜೋಗಿ ಮಂಜು, ಮುಖಂಡರಾದ ಪಾರ್ಥಸಾಥಿ, ರಮೇಶ್, ಜಗದೀಶ್ ಸೇರಿದಂತೆ ಮುಖಂಡರು ಇದ್ದರು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…