ಮೈಸೂರು

ಮೋದಿಯೇ ನಮ್ಮ ದೇವರು : ಪ್ರತಾಪ್ ಸಿಂಹ

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು ಹೇಳಲು, ನಾನು ಬಹಳ ಜ್ಯೂನಿಯರ್. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ ಎಂದರು.

ನಾನು ಪಕ್ಷದ ನೇಮಕದ ವಿಚಾರದಲ್ಲಿ ಹೇಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಕರೆಯುತ್ತಿದ್ದರು. ಹೀಗಾಗಿ ನಾನು ಅದೇ ದಾಟಿಯಲ್ಲೇ ಶುಭಾಶಯ ಕೋರಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾವೆಲ್ಲ ಗೆಲ್ಲುವುದು ಮೋದಿ ಅವರ ಹೆಸರಿನಿಂದ, ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಗೂ ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧ ಇರುವುದಿಲ್ಲ. ಬಿಜೆಪಿ ಸಂಘಟನೆ ದೃಷ್ಟಿಯಿಂದ ಅಷ್ಟೇ ರಾಜ್ಯಾಧ್ಯಕ್ಷರು ಆಗಬೇಕು. ಲೋಕಸಭಾ ಚುನಾವಣೆ ಮೋದಿ ಅವರ ಹೆಸರಿನಲ್ಲೇ ನಡೆಯುತ್ತದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago