ಮೈಸೂರು: 2023ರ ಏಪ್ರಿಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ.
ಈ ಸಂಬಂಧ ಹೋಟೆಲ್ ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕರು ಮೇ.21ರಂದು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ʼಬಾಕಿಯಿರುವ ಮೊತ್ತವನ್ನು ಜೂನ್.1 ಒಳಗಾಗಿ ಆವತಿಸಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ.
ಚಾಮರಾಜನಗರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಮೈಸೂರಿಗೆ ಪ್ರಧಾನಿ ಮೋದಿ 2023 ರ ಏಪ್ರಿಲ್ 9ರಿಂದ 11 ವರೆಗೆ ಆಗಮಿಸಿದ್ದ ವೇಳೆ ಈ ಬಾಕಿ ಬಿಲ್ ಪಾವತಿ ಉಳಿದಿದೆ. ಇನ್ನು ಈ ಕಾರ್ಯಕ್ರಮಕೆ ಅಂದಾಜು ಮೊತ್ತವನ್ನಾಗಿ 3 ಕೋಟಿ ರೂ ಎನ್ನಲಾಗಿತ್ತು. ಆದರೆ ಅದು 6.3 ಕೋಟಿಗೆ ತಲುಪಿತು.
ಉಳಿದ 3.3ಕೋಟಿ ರೂಗಳ ಬಾಕಿ ಮೊತ್ತದಲ್ಲಿ ರ್ಯಾಡಿಸನ್ ಬ್ಲ್ಯೂನ 80.6 ಲಕ್ಷ ಮೊತ್ತವನ್ನು ಅರಣ್ಯ ಇಲಾಖೆ ಬಾಕಿ ಉಳಿಸಿಕೊಂಡಿದ್ದು, ಅದನ್ನು ಜೂನ್. 1ರ ಒಳಗಾಗಿ ಪಾವತಿಸುವಂತೆ ಹೋಟೆಲ್ ಪತ್ರದಲ್ಲಿ ತಿಳಿಸಿದೆ.
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…