ಮೈಸೂರು: 2023ರ ಏಪ್ರಿಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ.
ಈ ಸಂಬಂಧ ಹೋಟೆಲ್ ಹಣಕಾಸು ವಿಭಾಗದ ಪ್ರಧಾನ ವ್ಯವಸ್ಥಾಪಕರು ಮೇ.21ರಂದು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ʼಬಾಕಿಯಿರುವ ಮೊತ್ತವನ್ನು ಜೂನ್.1 ಒಳಗಾಗಿ ಆವತಿಸಬೇಕು. ಇಲ್ಲವಾದಲ್ಲಿ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ.
ಚಾಮರಾಜನಗರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಮೈಸೂರಿಗೆ ಪ್ರಧಾನಿ ಮೋದಿ 2023 ರ ಏಪ್ರಿಲ್ 9ರಿಂದ 11 ವರೆಗೆ ಆಗಮಿಸಿದ್ದ ವೇಳೆ ಈ ಬಾಕಿ ಬಿಲ್ ಪಾವತಿ ಉಳಿದಿದೆ. ಇನ್ನು ಈ ಕಾರ್ಯಕ್ರಮಕೆ ಅಂದಾಜು ಮೊತ್ತವನ್ನಾಗಿ 3 ಕೋಟಿ ರೂ ಎನ್ನಲಾಗಿತ್ತು. ಆದರೆ ಅದು 6.3 ಕೋಟಿಗೆ ತಲುಪಿತು.
ಉಳಿದ 3.3ಕೋಟಿ ರೂಗಳ ಬಾಕಿ ಮೊತ್ತದಲ್ಲಿ ರ್ಯಾಡಿಸನ್ ಬ್ಲ್ಯೂನ 80.6 ಲಕ್ಷ ಮೊತ್ತವನ್ನು ಅರಣ್ಯ ಇಲಾಖೆ ಬಾಕಿ ಉಳಿಸಿಕೊಂಡಿದ್ದು, ಅದನ್ನು ಜೂನ್. 1ರ ಒಳಗಾಗಿ ಪಾವತಿಸುವಂತೆ ಹೋಟೆಲ್ ಪತ್ರದಲ್ಲಿ ತಿಳಿಸಿದೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…