ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಮೋದಿ ಮತಯಾಚನೆ ಮಾಡಿದ ಕ್ಷಣವನ್ನು ನೆನಪಿಸಿಕೊಂಡು, ಸಂಸದೆಯಾದಾಗ ಮೋದಿ ತಮ್ಮ ಮಂಡ್ಯ ಜಿಲ್ಲೆಗೆ ನೀಡಿದ ಅನುದಾನದ ಬಗ್ಗೆ ನೆನೆದರು.
ಇಂದು ಭಾರತ ದೇಶ ವಿಶ್ವದ ಪಟ್ಟಿಯಲ್ಲಿ ಅಭಿವೃದ್ಧಿಯ ಮೂಲಕ ತನ್ನ ಸ್ಥಾನ ಗಿಟ್ಟಿಸಿಕೊಂಡಿದೆ. ಅಭಿವೃದ್ಧಿಯೆ ಮೂಲ ಮಂತ್ರ ಎಂದು ಜಪಿಸುತ್ತಿರುವ ಮೋದಿಯ ಕೊಡುಗೆಗಳ ಬಗ್ಗೆ ಮಾತನಾಡುವುಕ್ಕೆ ನಾಲ್ಕು ಐದು ದಿನ ಬೇಕಾಗುತ್ತದೆ ಎಂದು ಕೊಂಡಾಡಿದರು.
ಕಳೆದ ಹತ್ತು ವರ್ಷಗಳಲ್ಲಿ ನೀವು ನೋಡಿರುವುದು ಬರಿ ಟ್ರೈಲರ್ ಅಷ್ಟೇ ಪಿಚ್ಚರ್ ಅಭಿ ಬಾಕಿ ಹೈ, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ನಿಶ್ಚಿತ. 2047 ದ ಹೊತ್ತಿಗೆ ಭಾರತ ದೇಶ ವಿಶ್ವದಲ್ಲೇ ಪ್ರಥಮ ಸ್ಥಾನ ಅಲಂಕರಿಸುವ ವಿಕಸಿತ ಸಂಕಲ್ಪ ಭಾರತಕ್ಕೆ ಶಕ್ತಿ ತುಂಬ ಬೇಕಿದೆ ಎಂದರು.
ಬಿಜೆಪಿಯನ್ನು 400 ಸ್ಥಾನ ಗೆಲ್ಲಿಸುವ ಮೂಲಕ ಮೋದಿಯವರಿಗೆ ನಾವು ಕೊಡುಗೆ ನೀಡಬೇಕು. ಭವ್ಯ ಭಾರತಕ್ಕಾಗಿ ನಿಮ್ಮ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಬೆಂಬಲಿಸಿ ಎಂದರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…