ಮೈಸೂರು

ಇದು ಬರಿ ಟ್ರೈಲರ್‌ ಅಷ್ಟೇ.. ಪಿಚ್ಚರ್‌ ಅಭಿ ಬಾಕಿ ಹೈ ಎಂದ ಸುಮಲತಾ ಅಂಬರೀಶ್!

ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್‌ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಮೋದಿ ಮತಯಾಚನೆ ಮಾಡಿದ ಕ್ಷಣವನ್ನು ನೆನಪಿಸಿಕೊಂಡು, ಸಂಸದೆಯಾದಾಗ ಮೋದಿ ತಮ್ಮ ಮಂಡ್ಯ ಜಿಲ್ಲೆಗೆ ನೀಡಿದ ಅನುದಾನದ ಬಗ್ಗೆ ನೆನೆದರು.

ಇಂದು ಭಾರತ ದೇಶ ವಿಶ್ವದ ಪಟ್ಟಿಯಲ್ಲಿ ಅಭಿವೃದ್ಧಿಯ ಮೂಲಕ ತನ್ನ ಸ್ಥಾನ ಗಿಟ್ಟಿಸಿಕೊಂಡಿದೆ. ಅಭಿವೃದ್ಧಿಯೆ ಮೂಲ ಮಂತ್ರ ಎಂದು ಜಪಿಸುತ್ತಿರುವ ಮೋದಿಯ ಕೊಡುಗೆಗಳ ಬಗ್ಗೆ ಮಾತನಾಡುವುಕ್ಕೆ ನಾಲ್ಕು ಐದು ದಿನ ಬೇಕಾಗುತ್ತದೆ ಎಂದು ಕೊಂಡಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ನೀವು ನೋಡಿರುವುದು ಬರಿ ಟ್ರೈಲರ್‌ ಅಷ್ಟೇ ಪಿಚ್ಚರ್‌ ಅಭಿ ಬಾಕಿ ಹೈ, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ನಿಶ್ಚಿತ. 2047 ದ ಹೊತ್ತಿಗೆ ಭಾರತ ದೇಶ ವಿಶ್ವದಲ್ಲೇ ಪ್ರಥಮ ಸ್ಥಾನ ಅಲಂಕರಿಸುವ ವಿಕಸಿತ ಸಂಕಲ್ಪ ಭಾರತಕ್ಕೆ ಶಕ್ತಿ ತುಂಬ ಬೇಕಿದೆ ಎಂದರು.

ಬಿಜೆಪಿಯನ್ನು 400 ಸ್ಥಾನ ಗೆಲ್ಲಿಸುವ ಮೂಲಕ ಮೋದಿಯವರಿಗೆ ನಾವು ಕೊಡುಗೆ ನೀಡಬೇಕು. ಭವ್ಯ ಭಾರತಕ್ಕಾಗಿ ನಿಮ್ಮ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಬೆಂಬಲಿಸಿ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

52 mins ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

54 mins ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

56 mins ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

58 mins ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

1 hour ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago