ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಮೋದಿ ಮತಯಾಚನೆ ಮಾಡಿದ ಕ್ಷಣವನ್ನು ನೆನಪಿಸಿಕೊಂಡು, ಸಂಸದೆಯಾದಾಗ ಮೋದಿ ತಮ್ಮ ಮಂಡ್ಯ ಜಿಲ್ಲೆಗೆ ನೀಡಿದ ಅನುದಾನದ ಬಗ್ಗೆ ನೆನೆದರು.
ಇಂದು ಭಾರತ ದೇಶ ವಿಶ್ವದ ಪಟ್ಟಿಯಲ್ಲಿ ಅಭಿವೃದ್ಧಿಯ ಮೂಲಕ ತನ್ನ ಸ್ಥಾನ ಗಿಟ್ಟಿಸಿಕೊಂಡಿದೆ. ಅಭಿವೃದ್ಧಿಯೆ ಮೂಲ ಮಂತ್ರ ಎಂದು ಜಪಿಸುತ್ತಿರುವ ಮೋದಿಯ ಕೊಡುಗೆಗಳ ಬಗ್ಗೆ ಮಾತನಾಡುವುಕ್ಕೆ ನಾಲ್ಕು ಐದು ದಿನ ಬೇಕಾಗುತ್ತದೆ ಎಂದು ಕೊಂಡಾಡಿದರು.
ಕಳೆದ ಹತ್ತು ವರ್ಷಗಳಲ್ಲಿ ನೀವು ನೋಡಿರುವುದು ಬರಿ ಟ್ರೈಲರ್ ಅಷ್ಟೇ ಪಿಚ್ಚರ್ ಅಭಿ ಬಾಕಿ ಹೈ, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ನಿಶ್ಚಿತ. 2047 ದ ಹೊತ್ತಿಗೆ ಭಾರತ ದೇಶ ವಿಶ್ವದಲ್ಲೇ ಪ್ರಥಮ ಸ್ಥಾನ ಅಲಂಕರಿಸುವ ವಿಕಸಿತ ಸಂಕಲ್ಪ ಭಾರತಕ್ಕೆ ಶಕ್ತಿ ತುಂಬ ಬೇಕಿದೆ ಎಂದರು.
ಬಿಜೆಪಿಯನ್ನು 400 ಸ್ಥಾನ ಗೆಲ್ಲಿಸುವ ಮೂಲಕ ಮೋದಿಯವರಿಗೆ ನಾವು ಕೊಡುಗೆ ನೀಡಬೇಕು. ಭವ್ಯ ಭಾರತಕ್ಕಾಗಿ ನಿಮ್ಮ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಬೆಂಬಲಿಸಿ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…