ಮೈಸೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನು ನಾಲ್ಕು ದಿನಗಳು ಇರುವಂತೆಯೇ ಇಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಪಕ್ಷದ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಆ ಮೂಲಕ ಮೈಸೂರು-ಕೊಡಗು ಕ್ಷೇತ್ರದ ಜನರ ಬಗ್ಗೆ ಹಾಗೂ ಯದುವೀರ್ ಅವರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ಈ ಪತ್ರದಲ್ಲಿ ನನ್ನ ಸಹೋದ್ಯೋಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೀ ಎಂದು ಪ್ರಾರಂಭಿಸಿದ್ದು, ಜನರ ಸೇವೆಯನ್ನು ಮಾಡುತ್ತಾ ಮೈಸೂರು ಒಡೆಯರ ಪರಂಪರೆಯನ್ನು ಮುನ್ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ. ತಂತ್ರಜ್ಞಾನದೊಂದಿಗೆ ಸಂಸ್ಕೃತಿ ಪರಂಪರೆಯನ್ನು ಸಂಯೋಜಿಸುವ ನಿಮ್ಮ ಸಾಮರ್ಥ್ಯ ಎಲ್ಲರಿಗೂ ಮಾದರಿ. ನಿಮ್ಮ ಕ್ರೀಯಾಶೀಲಾ ಕಾರ್ಯಗಳು ಮೈಸೂರಿನ ಪ್ರಗತಿಗೆ ಪ್ರೇರಣೆಯಾಗಲಿದೆ.
ಜನರ ಆಶೀರ್ವಾದದಿಂದ ಗೆದ್ದು ನೀವು ಸಂಸತ್ಗೆ ಬರುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮ್ಮಂತ ಸಂಸದರು ನನಗೆ ದೊಡ್ಡ ಆಸ್ತಿ. ಸಮಾಜ, ದೇಶದ ಕಲ್ಯಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸುವ ಕಾಲ ಬಂದಿದೆ. ಈ ಬಾರಿಯ ಚುನಾವಣೆ ನಮ್ಮ ಭವಿಷ್ಯವನ್ನು ವರ್ತಮಾನದಿಂದ ಉಜ್ವಲಗೊಳಿಸಲು ಇರುವ ಅವಕಾಶವಾಗಿದೆ. ಈ ಬಾರಿಯೂ ಬಿಜೆಪಿ ಸ್ಥಿರ ಸರ್ಕಾರವನ್ನು ನೀಡಲಿದೆ. ಮತ್ತು 2047ರಲ್ಲಿ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಕಾರ್ಯಕ್ಕೆ ವೇಗವನ್ನು ಸಹಾ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…