ಮೈಸೂರು

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ : ಯದುವೀರ್

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು.

ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಲಾಯಿತು,

ನರಸಿಂಹರಾಜ ಕ್ಷೇತ್ರಕ್ಕೆ ಒಳಪಡುವ ಸೋಲುಗರ ಬೀದಿ ಅಂಬೇಡ್ಕರ್ ಕಾಲೋನಿ, ಕ್ಯಾತಮಾರನಹಳ್ಳಿ ,ರಾಘವೇಂದ್ರ ನಗರ ಬಡಾವಣೆ,ಗಿರಿಯಾಬೋವಿ ಪಾಳ್ಯ,ಸಿದ್ದಾರ್ಥ ನಗರ,ವಿದ್ಯಾನಗರ,ತ್ರಿವೇಣಿ ವೃತ್ತ,ಆರ್.ಎಂ.ಎಸ್ ಲೇಔಟ್ ,ಶಕ್ತಿನಗರ, ಟೀಚರ್ಸ್ ಕಾಲೋನಿ , ಪಾಪಣ್ಣ ಲೇಔಟ್ , ಯರಗನಹಳ್ಳಿಯ ಟೆರಿಷಿಯನ್ ಕಾಲೇಜು ಸರ್ಕಲ್ ನ ವರೆಗೆ ರೋಡ್ ಶೋ ನಡೆಯಿತು.

ರೋಡ್ ಶೋನಲ್ಲಿ ಯದುವೀರ್ ಅವರು ಕುಂಕುಮ ಬಣ್ಣದ ವಸ್ತ್ರದಲ್ಲಿ ಮಿಂಚಿದರು, ಯದುವೀರ್ ಅವರ ಪೋಟೋ ವನ್ನು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕ್ಲಿಕಿಸಿ ಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು,

ಜನರನ್ನು ಉದ್ದೇಶಿಸಿ ಮಾತನಾಡಿದ ಯದುವೀರ್ ಭಾರತ ದೇಶದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಿದ್ದಾರೆ, ಆರ್ಥಿಕವಾಗಿ ಕುಸಿತಗೊಂಡಿದ್ದ ದೇಶವನ್ನು ಪ್ರಗತಿಕಾಣುವಂತೆ ಮಾಡಿದ್ದಾರೆ.

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ , ಮತದಾನ ನಮ್ಮೆಲ್ಲರ ಹಕ್ಕು ಅದನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಸಮಚಿತ್ತದಿಂದ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಭಾರತ ದೇಶವನ್ನು ಇತರೆ ದೇಶಗಳಿಗಿಂತ ಮುಂದುವರಿದ ರಾಷ್ಟ್ರವಾಗಿ ಕಟ್ಟೋಣ , ಏಪ್ರಿಲ್ 26 ರಂದು ಎಲ್ಲರೂ ಬಿಜೆಪಿಗೆ ಮತ ನೀಡಿ ನನ್ನ ಕ್ರಮ ಸಂಖ್ಯೆ 1 ಇದಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತವನ್ನ ನೀಡಿ , ನಿಮ್ಮ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು,

ಇದೆ ಸಂಧರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಆರ್ ಕ್ಷೇತ್ರದ ಮಾಜಿ ಶಾಸಕ ಎಸ್ ಎ ರಾಮದಾಸ್, ಮಾಜಿ ಮೇಯರ್ ಸಂದೆಶ್ ಸ್ವಾಮೀ , ಗಿರಿಧರ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಸಾತ್ ನೀಡಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

1 min ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

8 mins ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

20 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

40 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

57 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

1 hour ago