ಮೈಸೂರು

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ : ಯದುವೀರ್

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು.

ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಲಾಯಿತು,

ನರಸಿಂಹರಾಜ ಕ್ಷೇತ್ರಕ್ಕೆ ಒಳಪಡುವ ಸೋಲುಗರ ಬೀದಿ ಅಂಬೇಡ್ಕರ್ ಕಾಲೋನಿ, ಕ್ಯಾತಮಾರನಹಳ್ಳಿ ,ರಾಘವೇಂದ್ರ ನಗರ ಬಡಾವಣೆ,ಗಿರಿಯಾಬೋವಿ ಪಾಳ್ಯ,ಸಿದ್ದಾರ್ಥ ನಗರ,ವಿದ್ಯಾನಗರ,ತ್ರಿವೇಣಿ ವೃತ್ತ,ಆರ್.ಎಂ.ಎಸ್ ಲೇಔಟ್ ,ಶಕ್ತಿನಗರ, ಟೀಚರ್ಸ್ ಕಾಲೋನಿ , ಪಾಪಣ್ಣ ಲೇಔಟ್ , ಯರಗನಹಳ್ಳಿಯ ಟೆರಿಷಿಯನ್ ಕಾಲೇಜು ಸರ್ಕಲ್ ನ ವರೆಗೆ ರೋಡ್ ಶೋ ನಡೆಯಿತು.

ರೋಡ್ ಶೋನಲ್ಲಿ ಯದುವೀರ್ ಅವರು ಕುಂಕುಮ ಬಣ್ಣದ ವಸ್ತ್ರದಲ್ಲಿ ಮಿಂಚಿದರು, ಯದುವೀರ್ ಅವರ ಪೋಟೋ ವನ್ನು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕ್ಲಿಕಿಸಿ ಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು,

ಜನರನ್ನು ಉದ್ದೇಶಿಸಿ ಮಾತನಾಡಿದ ಯದುವೀರ್ ಭಾರತ ದೇಶದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಿದ್ದಾರೆ, ಆರ್ಥಿಕವಾಗಿ ಕುಸಿತಗೊಂಡಿದ್ದ ದೇಶವನ್ನು ಪ್ರಗತಿಕಾಣುವಂತೆ ಮಾಡಿದ್ದಾರೆ.

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ , ಮತದಾನ ನಮ್ಮೆಲ್ಲರ ಹಕ್ಕು ಅದನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಸಮಚಿತ್ತದಿಂದ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಭಾರತ ದೇಶವನ್ನು ಇತರೆ ದೇಶಗಳಿಗಿಂತ ಮುಂದುವರಿದ ರಾಷ್ಟ್ರವಾಗಿ ಕಟ್ಟೋಣ , ಏಪ್ರಿಲ್ 26 ರಂದು ಎಲ್ಲರೂ ಬಿಜೆಪಿಗೆ ಮತ ನೀಡಿ ನನ್ನ ಕ್ರಮ ಸಂಖ್ಯೆ 1 ಇದಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತವನ್ನ ನೀಡಿ , ನಿಮ್ಮ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು,

ಇದೆ ಸಂಧರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಆರ್ ಕ್ಷೇತ್ರದ ಮಾಜಿ ಶಾಸಕ ಎಸ್ ಎ ರಾಮದಾಸ್, ಮಾಜಿ ಮೇಯರ್ ಸಂದೆಶ್ ಸ್ವಾಮೀ , ಗಿರಿಧರ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಸಾತ್ ನೀಡಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

12 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

12 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

12 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

12 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

12 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

12 hours ago