ಮೈಸೂರು

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ : ಯದುವೀರ್

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು.

ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಲಾಯಿತು,

ನರಸಿಂಹರಾಜ ಕ್ಷೇತ್ರಕ್ಕೆ ಒಳಪಡುವ ಸೋಲುಗರ ಬೀದಿ ಅಂಬೇಡ್ಕರ್ ಕಾಲೋನಿ, ಕ್ಯಾತಮಾರನಹಳ್ಳಿ ,ರಾಘವೇಂದ್ರ ನಗರ ಬಡಾವಣೆ,ಗಿರಿಯಾಬೋವಿ ಪಾಳ್ಯ,ಸಿದ್ದಾರ್ಥ ನಗರ,ವಿದ್ಯಾನಗರ,ತ್ರಿವೇಣಿ ವೃತ್ತ,ಆರ್.ಎಂ.ಎಸ್ ಲೇಔಟ್ ,ಶಕ್ತಿನಗರ, ಟೀಚರ್ಸ್ ಕಾಲೋನಿ , ಪಾಪಣ್ಣ ಲೇಔಟ್ , ಯರಗನಹಳ್ಳಿಯ ಟೆರಿಷಿಯನ್ ಕಾಲೇಜು ಸರ್ಕಲ್ ನ ವರೆಗೆ ರೋಡ್ ಶೋ ನಡೆಯಿತು.

ರೋಡ್ ಶೋನಲ್ಲಿ ಯದುವೀರ್ ಅವರು ಕುಂಕುಮ ಬಣ್ಣದ ವಸ್ತ್ರದಲ್ಲಿ ಮಿಂಚಿದರು, ಯದುವೀರ್ ಅವರ ಪೋಟೋ ವನ್ನು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕ್ಲಿಕಿಸಿ ಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು,

ಜನರನ್ನು ಉದ್ದೇಶಿಸಿ ಮಾತನಾಡಿದ ಯದುವೀರ್ ಭಾರತ ದೇಶದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಿದ್ದಾರೆ, ಆರ್ಥಿಕವಾಗಿ ಕುಸಿತಗೊಂಡಿದ್ದ ದೇಶವನ್ನು ಪ್ರಗತಿಕಾಣುವಂತೆ ಮಾಡಿದ್ದಾರೆ.

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ , ಮತದಾನ ನಮ್ಮೆಲ್ಲರ ಹಕ್ಕು ಅದನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಸಮಚಿತ್ತದಿಂದ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಭಾರತ ದೇಶವನ್ನು ಇತರೆ ದೇಶಗಳಿಗಿಂತ ಮುಂದುವರಿದ ರಾಷ್ಟ್ರವಾಗಿ ಕಟ್ಟೋಣ , ಏಪ್ರಿಲ್ 26 ರಂದು ಎಲ್ಲರೂ ಬಿಜೆಪಿಗೆ ಮತ ನೀಡಿ ನನ್ನ ಕ್ರಮ ಸಂಖ್ಯೆ 1 ಇದಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತವನ್ನ ನೀಡಿ , ನಿಮ್ಮ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು,

ಇದೆ ಸಂಧರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಆರ್ ಕ್ಷೇತ್ರದ ಮಾಜಿ ಶಾಸಕ ಎಸ್ ಎ ರಾಮದಾಸ್, ಮಾಜಿ ಮೇಯರ್ ಸಂದೆಶ್ ಸ್ವಾಮೀ , ಗಿರಿಧರ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಸಾತ್ ನೀಡಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

10 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

11 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

12 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

13 hours ago