ಮೈಸೂರು

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ : ಯದುವೀರ್

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು.

ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಲಾಯಿತು,

ನರಸಿಂಹರಾಜ ಕ್ಷೇತ್ರಕ್ಕೆ ಒಳಪಡುವ ಸೋಲುಗರ ಬೀದಿ ಅಂಬೇಡ್ಕರ್ ಕಾಲೋನಿ, ಕ್ಯಾತಮಾರನಹಳ್ಳಿ ,ರಾಘವೇಂದ್ರ ನಗರ ಬಡಾವಣೆ,ಗಿರಿಯಾಬೋವಿ ಪಾಳ್ಯ,ಸಿದ್ದಾರ್ಥ ನಗರ,ವಿದ್ಯಾನಗರ,ತ್ರಿವೇಣಿ ವೃತ್ತ,ಆರ್.ಎಂ.ಎಸ್ ಲೇಔಟ್ ,ಶಕ್ತಿನಗರ, ಟೀಚರ್ಸ್ ಕಾಲೋನಿ , ಪಾಪಣ್ಣ ಲೇಔಟ್ , ಯರಗನಹಳ್ಳಿಯ ಟೆರಿಷಿಯನ್ ಕಾಲೇಜು ಸರ್ಕಲ್ ನ ವರೆಗೆ ರೋಡ್ ಶೋ ನಡೆಯಿತು.

ರೋಡ್ ಶೋನಲ್ಲಿ ಯದುವೀರ್ ಅವರು ಕುಂಕುಮ ಬಣ್ಣದ ವಸ್ತ್ರದಲ್ಲಿ ಮಿಂಚಿದರು, ಯದುವೀರ್ ಅವರ ಪೋಟೋ ವನ್ನು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕ್ಲಿಕಿಸಿ ಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು,

ಜನರನ್ನು ಉದ್ದೇಶಿಸಿ ಮಾತನಾಡಿದ ಯದುವೀರ್ ಭಾರತ ದೇಶದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಿದ್ದಾರೆ, ಆರ್ಥಿಕವಾಗಿ ಕುಸಿತಗೊಂಡಿದ್ದ ದೇಶವನ್ನು ಪ್ರಗತಿಕಾಣುವಂತೆ ಮಾಡಿದ್ದಾರೆ.

ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ , ಮತದಾನ ನಮ್ಮೆಲ್ಲರ ಹಕ್ಕು ಅದನ್ನು ಸದುಪಯೋಗ ಪಡಿಸಿಕೊಂಡು ಈ ಬಾರಿ ಸಮಚಿತ್ತದಿಂದ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಭಾರತ ದೇಶವನ್ನು ಇತರೆ ದೇಶಗಳಿಗಿಂತ ಮುಂದುವರಿದ ರಾಷ್ಟ್ರವಾಗಿ ಕಟ್ಟೋಣ , ಏಪ್ರಿಲ್ 26 ರಂದು ಎಲ್ಲರೂ ಬಿಜೆಪಿಗೆ ಮತ ನೀಡಿ ನನ್ನ ಕ್ರಮ ಸಂಖ್ಯೆ 1 ಇದಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತವನ್ನ ನೀಡಿ , ನಿಮ್ಮ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು,

ಇದೆ ಸಂಧರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಆರ್ ಕ್ಷೇತ್ರದ ಮಾಜಿ ಶಾಸಕ ಎಸ್ ಎ ರಾಮದಾಸ್, ಮಾಜಿ ಮೇಯರ್ ಸಂದೆಶ್ ಸ್ವಾಮೀ , ಗಿರಿಧರ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಸಾತ್ ನೀಡಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

2 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

2 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

2 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

2 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

2 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

2 hours ago