ಮೈಸೂರು : ಇತ್ತೀಚೆಗೆ ನಗರದ ಎಸ್ಬಿಐ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್ಬಿಐನ ಪ್ರಾದೇಶಿಕ ಅಧಿಕಾರಿ ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆ ಅವರು ಖಾತೆಯನ್ನು ಹೋಲ್ಡ್ ಮಾಡುವಂತೆ ಬ್ಯಾಂಕ್ ಗಳಿಗೆ ಮಾಹಿತಿ ನೀಡಿರುತ್ತಾರೆ. ಆ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಹೋಲ್ಡ್ ಆಗಿರುತ್ತದೆ. ಹಣ ಕಡಿತವಾಗುವುದಿಲ್ಲ. ಈ ಬಗ್ಗೆ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಸ್ಷಷ್ಟಪಡಿಸಿದರು.
ಇದರ ಜೊತೆಗೆ ಒಂದಷ್ಟು ತಾಂತ್ರಿಕ ಸಮಸ್ಯೆಗಳಿಂದಲೂ ಸಮಸ್ಯೆ ಆಗಿರಬಹುದು. ಖಾತೆದಾರರಿಗೆ ಮಾಹಿತಿ ಕೊಡದೆ ಹಣ ಕಡಿತ ಮಾಡುವುದಿಲ್ಲ.
ಗ್ರಾಹಕರ ಹಣ ನಮ್ಮ ಬ್ಯಾಂಕ್ ಖಾತೆಯಲ್ಲಿ ಭದ್ರವಾಗಿರುತ್ತದೆ. ಖಾತೆಯಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ನೆರವಾಗಿ ಸ್ಥಳೀಯ ಬ್ರ್ಯಾಂಚ್ ಮತ್ತು ರೀಜನಲ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ಈಗಾಗಲೇ ನಗರದ ಎಲ್ಲಾ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಗ್ರಾಹಕರು ಮಾಹಿತಿ ಪಡೆದು ಕೊಳ್ಳಬಹುದು ಭಯ ಪಡುವ ಅಗತ್ಯವಿಲ್ಲ. ಆದರೆ, ಗ್ರಾಹಕರು ಅಪರಿಚಿತ ವ್ಯಕ್ತಿಯ ಜೊತೆ ಬ್ಯಾಂಕ್ ವ್ಯವಹಾರ ಮಾಡಬಾರದು. ಇದರಿಂದ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…