ಮೈಸೂರು : ಇತ್ತೀಚೆಗೆ ನಗರದ ಎಸ್ಬಿಐ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್ಬಿಐನ ಪ್ರಾದೇಶಿಕ ಅಧಿಕಾರಿ ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆ ಅವರು ಖಾತೆಯನ್ನು ಹೋಲ್ಡ್ ಮಾಡುವಂತೆ ಬ್ಯಾಂಕ್ ಗಳಿಗೆ ಮಾಹಿತಿ ನೀಡಿರುತ್ತಾರೆ. ಆ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಹೋಲ್ಡ್ ಆಗಿರುತ್ತದೆ. ಹಣ ಕಡಿತವಾಗುವುದಿಲ್ಲ. ಈ ಬಗ್ಗೆ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಸ್ಷಷ್ಟಪಡಿಸಿದರು.
ಇದರ ಜೊತೆಗೆ ಒಂದಷ್ಟು ತಾಂತ್ರಿಕ ಸಮಸ್ಯೆಗಳಿಂದಲೂ ಸಮಸ್ಯೆ ಆಗಿರಬಹುದು. ಖಾತೆದಾರರಿಗೆ ಮಾಹಿತಿ ಕೊಡದೆ ಹಣ ಕಡಿತ ಮಾಡುವುದಿಲ್ಲ.
ಗ್ರಾಹಕರ ಹಣ ನಮ್ಮ ಬ್ಯಾಂಕ್ ಖಾತೆಯಲ್ಲಿ ಭದ್ರವಾಗಿರುತ್ತದೆ. ಖಾತೆಯಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ನೆರವಾಗಿ ಸ್ಥಳೀಯ ಬ್ರ್ಯಾಂಚ್ ಮತ್ತು ರೀಜನಲ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ಈಗಾಗಲೇ ನಗರದ ಎಲ್ಲಾ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಗ್ರಾಹಕರು ಮಾಹಿತಿ ಪಡೆದು ಕೊಳ್ಳಬಹುದು ಭಯ ಪಡುವ ಅಗತ್ಯವಿಲ್ಲ. ಆದರೆ, ಗ್ರಾಹಕರು ಅಪರಿಚಿತ ವ್ಯಕ್ತಿಯ ಜೊತೆ ಬ್ಯಾಂಕ್ ವ್ಯವಹಾರ ಮಾಡಬಾರದು. ಇದರಿಂದ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…