ಮೈಸೂರು

ಬ್ಯಾಂಕಿನಲ್ಲಿ ಹಣ ಕಡಿತ : SBI ಪ್ರಾದೇಶಿಕ ಅಧಿಕಾರಿ ಹೇಳಿದ್ದೇನು ?

ಮೈಸೂರು : ಇತ್ತೀಚೆಗೆ ನಗರದ ಎಸ್‌ಬಿಐ ಬ್ಯಾಂಕ್‌ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್‌ಬಿಐನ ಪ್ರಾದೇಶಿಕ ಅಧಿಕಾರಿ  ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆ  ಅವರು ಖಾತೆಯನ್ನು ಹೋಲ್ಡ್‌  ಮಾಡುವಂತೆ ಬ್ಯಾಂಕ್ ಗಳಿಗೆ ಮಾಹಿತಿ ನೀಡಿರುತ್ತಾರೆ. ಆ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಹೋಲ್ಡ್ ಆಗಿರುತ್ತದೆ.  ಹಣ ಕಡಿತವಾಗುವುದಿಲ್ಲ. ಈ ಬಗ್ಗೆ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಸ್ಷಷ್ಟಪಡಿಸಿದರು.

ಇದರ ಜೊತೆಗೆ ಒಂದಷ್ಟು ತಾಂತ್ರಿಕ ಸಮಸ್ಯೆಗಳಿಂದಲೂ ಸಮಸ್ಯೆ ಆಗಿರಬಹುದು. ಖಾತೆದಾರರಿಗೆ ಮಾಹಿತಿ ಕೊಡದೆ ಹಣ ಕಡಿತ ಮಾಡುವುದಿಲ್ಲ.
ಗ್ರಾಹಕರ ಹಣ ನಮ್ಮ ಬ್ಯಾಂಕ್  ಖಾತೆಯಲ್ಲಿ ಭದ್ರವಾಗಿರುತ್ತದೆ. ಖಾತೆಯಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ನೆರವಾಗಿ ಸ್ಥಳೀಯ ಬ್ರ್ಯಾಂಚ್ ಮತ್ತು ರೀಜನಲ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಈಗಾಗಲೇ ನಗರದ ಎಲ್ಲಾ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಗ್ರಾಹಕರು ಮಾಹಿತಿ ಪಡೆದು ಕೊಳ್ಳಬಹುದು ಭಯ ಪಡುವ ಅಗತ್ಯವಿಲ್ಲ.  ಆದರೆ, ಗ್ರಾಹಕರು ಅಪರಿಚಿತ ವ್ಯಕ್ತಿಯ ಜೊತೆ ಬ್ಯಾಂಕ್ ವ್ಯವಹಾರ ಮಾಡಬಾರದು.  ಇದರಿಂದ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago