ಮೈಸೂರು

ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾವಹಿಸಿ : ಯೋಗೀಶ್ ಮಿಶ್ರ

ಮೈಸೂರು :  ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಚಾಮುಂಡೇಶ್ವರಿ ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರಾಗಿರುವ ಯೋಗೀಶ್ ಮಿಶ್ರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 4 ಕ್ಷೇತ್ರಗಳ ಸಹಾಯಕ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.

ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.

ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.

ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು, ಹತ್ತು ಲಕ್ಷ ಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ 10 ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಮಾತನಾಡಿ ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್ ಪೋಸ್ಟ್ ಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ವಿವರಿಸಿದರು.

ಸಭೆಯ ನಂತರ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿಚಾರಕರ ಕೋಶಕ್ಕೆ, ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಉಸ್ತುವಾರಿ ಸಮಿತಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಡಿವೈಎಸ್ಪಿ ಮುತ್ತುರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

12 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago