ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಕಪಿಚೇಷ್ಟೆ: ಪ್ರವಾಸಿಗರೊಬ್ಬರ ಮೊಬೈಲ್ ಕಸಿದು ಮರವೇರಿದ ಕಪಿರಾಯ

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್‌ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.

ಪರ್ಸ್‌ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

10 seconds ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

55 seconds ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

7 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

16 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

42 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

53 mins ago