ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.
ಪರ್ಸ್ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…