ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.
ಪರ್ಸ್ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…