ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಕಪಿಚೇಷ್ಟೆ: ಪ್ರವಾಸಿಗರೊಬ್ಬರ ಮೊಬೈಲ್ ಕಸಿದು ಮರವೇರಿದ ಕಪಿರಾಯ

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್‌ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.

ಪರ್ಸ್‌ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 mins ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

3 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

6 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

7 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

10 hours ago