ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.
ಪರ್ಸ್ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…