ಮೈಸೂರು

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ನಿರ್ದೇಶನ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಜನವರಿ 2 ರಂದು ಲಲಿತಾ ಸಹಸ್ರನಾಮ ಕಾರ್ಯಕ್ರಮ, ಜನವರಿ 3 ಹಾಗೂ 4 ರಂದು ವಾರಾಂತ್ಯವಿದ್ದು, ದರ್ಶನಕ್ಕೆ ಬರುವ ಭಕ್ತಾದಿಗಳ ನೂಕು ನುಗ್ಗಲು ಉಂಟಾಗದಂತೆ ಸರದಿ ಸಾಲುಗಳನ್ನು ಹೆಚ್ಚಿಗೆ ಮಾಡುವಂತೆ ತಿಳಿಸಿದರು.

ಸುಗಮ‌ ವಾಹನ ಸಂಚಾರಕ್ಕೆ ಹಾಗೂ‌ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ. ಹೆಚ್ಚಿನ ಜನದಟ್ಟಣೆ ಉಂಟಾದ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸಹ ಮಹಿಷಾಸುರ ಪ್ರತಿಮೆಯ ಬಳಿ ನಿಲ್ಲಿಸಿ ನಂತರ ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಮಾಡುವುದು ಉತ್ತಮ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕುಡಿಯುವ ನೀರಿನ ವ್ಯವಸ್ಥೆಗಳನ್ನು ಹೆಚ್ಚಿನ ಸ್ಥಳಗಳಲ್ಲಿ ಮಾಡಿ. ಸ್ವಚ್ಛತೆ ಕಪಾಡಲು ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗಳನ್ನು ನಿಯೋಜಿಸಿ. ಕೆ‌ಎಸ್ಆರ್ ಟಿಸಿ ನಗರ ವಿಭಾಗದಿಂದ ಹೆಚ್ಚಿನ ಬಸ್ ಟ್ರಿಪ್ ಗಳನ್ನು ಮಾಡುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಎರಡು ಅಂಬ್ಯೂಲೆನ್ಸ್ ನ್ನು ನಿಯೋಜಿಸಬೇಕು ಹಾಗೂ ದಾನಿಗಳು ನೀಡುವ ಆಹಾರ ಪದಾರ್ಥಗಳಲ್ಲಿ ದಸೋಹ ಭವನದಲ್ಲಿ ಪ್ರಸಾದ ಸಿದ್ಧಪಡಿಸಿದರೂ ನೀಡಿರುವ ಆಹಾರ ಪದರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಚಾಮುಂಡಿ‌ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರೂಪ, ದೇವಸ್ಥಾನದ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

30 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

33 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

36 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

37 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

41 mins ago