Categories: ಮೈಸೂರು

ಮುಡಾದಲ್ಲಿ 15 ಸಾವಿರಕ್ಕೂ ಅಧಿಕ ನಿವೇಶನಗಳು ಬಾಕಿ: ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆಯ ನೆಪ

ಮೈಸೂರು: ಮುಡಾ ನಿವೇಶನಗಳಲ್ಲಿ ಅಕ್ರಮ ಆರೋಪದ ಪಟ್ಟಿ  ದಿನದಿಂದ ದಿನಕ್ಕೆ ಏರುತ್ತಿವೆ. ಈ ನಡುವೆ ಇದೀಗ ಮುಡಾ 15 ಸಾವಿರಕ್ಕೂ ಅಧಿಕ ನಿವೇಶನಗಳನ್ನು ಹಸ್ತಾಂತರ ಮಾಡದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಮುಡಾದಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದ ಖಾಸಗಿ ಬಡಾವಣೆಗಳನ್ನು ಇನ್ನೂ ಹಸ್ತಾಂತರ ಮಾಡದೇ ಕಚೇರಿಯಲ್ಲೇ ಬಾಕಿ ಉಳಿಸಿಕೊಂಡಿದೆ. ಈ ನಿವೇಶನಗಳನ್ನು ಹಸ್ತಾಂತರ ಮಾಡುವುದಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಒಟ್ಟು 21 ಗ್ರಾಮ ಪಂಚಾಯಿತಿಯ 202 ಸಂಖ್ಯೆಗಳ 15085 ನಿವೇಶನಗಳು ಹಸ್ತಾಂತರವಾಗದೇ ಮುಡಾ ಕಚೇರಿಯಲ್ಲಿಯೇ ಬಾಕಿ ಉಳಿದುಕೊಂಡಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಮುಡಾ ಕಚೇರಿಯಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರವಾಗಬೇಕಿರುವ ಖಾಸಗಿ ಬಡಾವಣೆಗಳು

1. ಮೈಸೂರು ಮಹಾನಗರ ಪಾಲಿಕೆಯ 291 ನಿವೇಶನಗಳು
2. ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1059 ನಿವೇಶನಗಳು
3. ಹೂಟಗಳ್ಳಿ ನಗರಸಭಾ ಕಾರ್ಯಾಲಯ ವ್ಯಾಪ್ತಿಯ 119 ನಿವೇಶನಗಳು
4. ಕಡಕೊಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1347 ನಿವೇಶನಗಳು
5. ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2169 ನಿವೇಶನಗಳು
6. ವರುಣಾ ವ್ಯಾಪ್ತಿಯ 1400 ನಿವೇಶನಗಳು
7. ವಾಜಮಂಗಲ ವ್ಯಾಪ್ತಿಯ 1646 ನಿವೇಶನಗಳು
8. ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1050 ನಿವೇಶನಗಳು
9. ಇಲವಾಲ ಗ್ರಾಮ ಪಂಚಾಯಿತಿಯ 1573 ನಿವೇಶನಗಳು
10. ಬೆಳಗೊಳ ಗ್ರಾಮ ಪಂಚಾಯಿತಿಯ 1220 ನಿವೇಶನಗಳು

ಈ ಮೇಲಿರುವ ನಿವೇಶನಗಳಲ್ಲದೆ ಆಲನಹಳ್ಳಿ, ದೇವನೂರು, ಗೋಪಾಲಪುರ, ನಾಗವಾಲ, ಉದ್ಬೂರು, ಸಿಂಧುವಳ್ಳಿ, ರಮ್ಮನಹಳ್ಳಿ, ಮೊಸಂಬಯ್ಯನಹಳ್ಳಿ ವ್ಯಾಪ್ತಿಯ ಸಾವಿರಾರು ನಿವೇಶನಗಳನ್ನು ಮುಡಾ ಕಚೇರಿಯಿಂದ ಹಸ್ತಾಂತರ ಆಗಬೇಕಿದೆ. ಆದಾಗ್ಯೂ ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಇನ್ನಷ್ಟು ದಿನಗಳ ಕಾಲ ವಿಳಂಬವಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

17 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

44 mins ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

1 hour ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

2 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

2 hours ago