Categories: ಮೈಸೂರು

ಮುಡಾದಲ್ಲಿ 15 ಸಾವಿರಕ್ಕೂ ಅಧಿಕ ನಿವೇಶನಗಳು ಬಾಕಿ: ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆಯ ನೆಪ

ಮೈಸೂರು: ಮುಡಾ ನಿವೇಶನಗಳಲ್ಲಿ ಅಕ್ರಮ ಆರೋಪದ ಪಟ್ಟಿ  ದಿನದಿಂದ ದಿನಕ್ಕೆ ಏರುತ್ತಿವೆ. ಈ ನಡುವೆ ಇದೀಗ ಮುಡಾ 15 ಸಾವಿರಕ್ಕೂ ಅಧಿಕ ನಿವೇಶನಗಳನ್ನು ಹಸ್ತಾಂತರ ಮಾಡದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಮುಡಾದಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದ ಖಾಸಗಿ ಬಡಾವಣೆಗಳನ್ನು ಇನ್ನೂ ಹಸ್ತಾಂತರ ಮಾಡದೇ ಕಚೇರಿಯಲ್ಲೇ ಬಾಕಿ ಉಳಿಸಿಕೊಂಡಿದೆ. ಈ ನಿವೇಶನಗಳನ್ನು ಹಸ್ತಾಂತರ ಮಾಡುವುದಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಒಟ್ಟು 21 ಗ್ರಾಮ ಪಂಚಾಯಿತಿಯ 202 ಸಂಖ್ಯೆಗಳ 15085 ನಿವೇಶನಗಳು ಹಸ್ತಾಂತರವಾಗದೇ ಮುಡಾ ಕಚೇರಿಯಲ್ಲಿಯೇ ಬಾಕಿ ಉಳಿದುಕೊಂಡಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಮುಡಾ ಕಚೇರಿಯಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರವಾಗಬೇಕಿರುವ ಖಾಸಗಿ ಬಡಾವಣೆಗಳು

1. ಮೈಸೂರು ಮಹಾನಗರ ಪಾಲಿಕೆಯ 291 ನಿವೇಶನಗಳು
2. ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1059 ನಿವೇಶನಗಳು
3. ಹೂಟಗಳ್ಳಿ ನಗರಸಭಾ ಕಾರ್ಯಾಲಯ ವ್ಯಾಪ್ತಿಯ 119 ನಿವೇಶನಗಳು
4. ಕಡಕೊಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1347 ನಿವೇಶನಗಳು
5. ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2169 ನಿವೇಶನಗಳು
6. ವರುಣಾ ವ್ಯಾಪ್ತಿಯ 1400 ನಿವೇಶನಗಳು
7. ವಾಜಮಂಗಲ ವ್ಯಾಪ್ತಿಯ 1646 ನಿವೇಶನಗಳು
8. ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1050 ನಿವೇಶನಗಳು
9. ಇಲವಾಲ ಗ್ರಾಮ ಪಂಚಾಯಿತಿಯ 1573 ನಿವೇಶನಗಳು
10. ಬೆಳಗೊಳ ಗ್ರಾಮ ಪಂಚಾಯಿತಿಯ 1220 ನಿವೇಶನಗಳು

ಈ ಮೇಲಿರುವ ನಿವೇಶನಗಳಲ್ಲದೆ ಆಲನಹಳ್ಳಿ, ದೇವನೂರು, ಗೋಪಾಲಪುರ, ನಾಗವಾಲ, ಉದ್ಬೂರು, ಸಿಂಧುವಳ್ಳಿ, ರಮ್ಮನಹಳ್ಳಿ, ಮೊಸಂಬಯ್ಯನಹಳ್ಳಿ ವ್ಯಾಪ್ತಿಯ ಸಾವಿರಾರು ನಿವೇಶನಗಳನ್ನು ಮುಡಾ ಕಚೇರಿಯಿಂದ ಹಸ್ತಾಂತರ ಆಗಬೇಕಿದೆ. ಆದಾಗ್ಯೂ ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಇನ್ನಷ್ಟು ದಿನಗಳ ಕಾಲ ವಿಳಂಬವಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

8 mins ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

24 mins ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

52 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

3 hours ago