Categories: ಮೈಸೂರು

ಮುಡಾದಲ್ಲಿ 15 ಸಾವಿರಕ್ಕೂ ಅಧಿಕ ನಿವೇಶನಗಳು ಬಾಕಿ: ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆಯ ನೆಪ

ಮೈಸೂರು: ಮುಡಾ ನಿವೇಶನಗಳಲ್ಲಿ ಅಕ್ರಮ ಆರೋಪದ ಪಟ್ಟಿ  ದಿನದಿಂದ ದಿನಕ್ಕೆ ಏರುತ್ತಿವೆ. ಈ ನಡುವೆ ಇದೀಗ ಮುಡಾ 15 ಸಾವಿರಕ್ಕೂ ಅಧಿಕ ನಿವೇಶನಗಳನ್ನು ಹಸ್ತಾಂತರ ಮಾಡದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಮುಡಾದಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದ ಖಾಸಗಿ ಬಡಾವಣೆಗಳನ್ನು ಇನ್ನೂ ಹಸ್ತಾಂತರ ಮಾಡದೇ ಕಚೇರಿಯಲ್ಲೇ ಬಾಕಿ ಉಳಿಸಿಕೊಂಡಿದೆ. ಈ ನಿವೇಶನಗಳನ್ನು ಹಸ್ತಾಂತರ ಮಾಡುವುದಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಒಟ್ಟು 21 ಗ್ರಾಮ ಪಂಚಾಯಿತಿಯ 202 ಸಂಖ್ಯೆಗಳ 15085 ನಿವೇಶನಗಳು ಹಸ್ತಾಂತರವಾಗದೇ ಮುಡಾ ಕಚೇರಿಯಲ್ಲಿಯೇ ಬಾಕಿ ಉಳಿದುಕೊಂಡಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಮುಡಾ ಕಚೇರಿಯಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರವಾಗಬೇಕಿರುವ ಖಾಸಗಿ ಬಡಾವಣೆಗಳು

1. ಮೈಸೂರು ಮಹಾನಗರ ಪಾಲಿಕೆಯ 291 ನಿವೇಶನಗಳು
2. ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1059 ನಿವೇಶನಗಳು
3. ಹೂಟಗಳ್ಳಿ ನಗರಸಭಾ ಕಾರ್ಯಾಲಯ ವ್ಯಾಪ್ತಿಯ 119 ನಿವೇಶನಗಳು
4. ಕಡಕೊಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1347 ನಿವೇಶನಗಳು
5. ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2169 ನಿವೇಶನಗಳು
6. ವರುಣಾ ವ್ಯಾಪ್ತಿಯ 1400 ನಿವೇಶನಗಳು
7. ವಾಜಮಂಗಲ ವ್ಯಾಪ್ತಿಯ 1646 ನಿವೇಶನಗಳು
8. ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1050 ನಿವೇಶನಗಳು
9. ಇಲವಾಲ ಗ್ರಾಮ ಪಂಚಾಯಿತಿಯ 1573 ನಿವೇಶನಗಳು
10. ಬೆಳಗೊಳ ಗ್ರಾಮ ಪಂಚಾಯಿತಿಯ 1220 ನಿವೇಶನಗಳು

ಈ ಮೇಲಿರುವ ನಿವೇಶನಗಳಲ್ಲದೆ ಆಲನಹಳ್ಳಿ, ದೇವನೂರು, ಗೋಪಾಲಪುರ, ನಾಗವಾಲ, ಉದ್ಬೂರು, ಸಿಂಧುವಳ್ಳಿ, ರಮ್ಮನಹಳ್ಳಿ, ಮೊಸಂಬಯ್ಯನಹಳ್ಳಿ ವ್ಯಾಪ್ತಿಯ ಸಾವಿರಾರು ನಿವೇಶನಗಳನ್ನು ಮುಡಾ ಕಚೇರಿಯಿಂದ ಹಸ್ತಾಂತರ ಆಗಬೇಕಿದೆ. ಆದಾಗ್ಯೂ ಹಸ್ತಾಂತರಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಇನ್ನಷ್ಟು ದಿನಗಳ ಕಾಲ ವಿಳಂಬವಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

21 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago