ಮೈಸೂರು

ಸಂಸದ ಪ್ರಜ್ವಲ್‌ ನಿತ್ಯಾನಂದನ ದೇಶಕ್ಕೆ ಸೇರಲು ಪ್ರಯತ್ನಿಸುತ್ತಿದ್ದಾರೆ: ಲಕ್ಷ್ಮಣ್‌ ಆರೋಪ

ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ದೇಶ ಬಿಟ್ಟು ಹೋಗಿ ಮತ್ತೊಂದು ಹೊಸ ದೇಶವನ್ನು ಕಟ್ಟಿಕೊಂಡಿರುವ ನಿತ್ಯಾನಂದಸ್ವಾಮಿ ಇರುವ ಜಾಗಕ್ಕೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸೇರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

ನಗರದಲ್ಲಿ ಶುಕ್ರವಾರ(ಮೇ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯಾನಂದ ಪ್ರಕರಣ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ನನಗಿರುವ ಮಾಹಿತಿ ಪ್ರಕಾರ ಹಾಸನ ಸಂಸದ ಪ್ರಜ್ವಲ್‌ ನಿತ್ಯಾನಂದಸ್ವಾಮಿ ಬಳಿ ಸೇರಲು ಪ್ರಯತ್ನಿಸುತ್ತಿದ್ದಾರೆ. ಆದರೆ ಜೆಡಿಎಸ್‌ ರಾಜ್ಯದಲ್ಲಿ ಪ್ರೆಸ್‌ಮೀಟ್‌ ಮತ್ತು ಪ್ರತಿಭಟನೆಗಳನ್ನು ಮಾಡಿ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ನೇರವಾಗಿ ಆರೋಪ ಮಾಡಿದರು.

ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಎಚ್‌.ಡಿ ಕುಮಾರಸ್ವಾಮಿಗೆ ಸಂತ್ರಸ್ತೆಯರ ಬಗ್ಗೆ ಕಾಳಜಿ ಇಲ್ಲ. ರಾಜ್ಯಪಾಲರಿಗೆ ಪ್ರಜ್ವಲ್‌ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಮನವಿ ಮಾಡಿದ್ದೀರಾ? ಅಮಿತ್‌ ಶಾ ನಿಮಗೇನಾದರೂ ಪ್ರಕರಣ ಮುಚ್ಚಿ ಹಾಕುವ ಭರವಸೆ ನೀಡಿದ್ದಾರಾ ಎಂದು ಪ್ರಶ್ನಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

3 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

4 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

4 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

4 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

15 hours ago