ಮೈಸೂರು: ನೂತನ ಪಾರ್ಲಿಮೆಂಟ್ನಲ್ಲಿನ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಭಿಯಾನಗಳು ಹೆಚ್ಚುತ್ತಿವೆ. ಆರೋಪಿಗಳ ಬಳಿ ದೊರೆತ ಪಾಸ್ ಸಂಸದ ಪ್ರತಾಪ್ ಸಿಂಹರಿಂದ ಪಡೆದದ್ದು ಎಂದು ಸಾಭೀತಾದ ಹಿನ್ನಲೆ ಅವರ ಟೀಕೆಗಳು ಹೆಚ್ಚಾಗುತ್ತಿವೆ.
ಕಿಡಿಗೇಡಿಗಳಿಗೆ ವಿಸಿಟರ್ ಪಾಸ್ ನೀಡಿ ಸಂಸತ್ತಿನ ಭದ್ರತೆಯನ್ನು ಅಪಾಯಕ್ಕೊಡ್ಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನೆನ್ನೆ (ಬುಧವಾರ), ಇಂದು ನಗರದಲ್ಲಿ ಪ್ರತಿಭಟನೆ ನಡೆಸಿ ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದರು.
ಇದರ ಬೆನ್ನಲ್ಲೇ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನಗರದ ಮಹಾರಾಜ ಸರ್ಕಲ್ ನಲ್ಲಿ ಪ್ರತಾಪ್ ಸಿಂಹ ದೇಶದ್ರೋಹಿ ಅಂತ ನಮೂದಿಸಿರುವ ಫ್ಲೆಕ್ಸ್ ಹಾಕಿದೆ. ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ.
ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ. ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…