ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು
ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.





