ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು
ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…