ಮೈಸೂರು

ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ : ಪ್ರತಾಪ್‌ ಸಿಂಹ

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು

ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ‌, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

 

andolana

Recent Posts

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

36 mins ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

40 mins ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

52 mins ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

1 hour ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

2 hours ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

3 hours ago