ಮೈಸೂರು

ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ : ಪ್ರತಾಪ್‌ ಸಿಂಹ

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು

ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ‌, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

 

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

11 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

12 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

13 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

21 hours ago