ಮೈಸೂರು

ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ : ಪ್ರತಾಪ್‌ ಸಿಂಹ

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು

ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ‌, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

 

andolana

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

52 mins ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

3 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

4 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

5 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

7 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

7 hours ago