ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ ಆಗ್ತಿದೆ. ಭಾರತವನ್ನು ಜೋಡಿಸುವುದಕ್ಕೆ ನಡಿಗೆ ಪ್ರಾರಂಭಿಸಿರುವವರು ‘ಭಾರತ ತೋಡೋ’ ತಂಡದ ಸಹವಾಸವನ್ನು ಬಿಡಲಿ ಎಂದರು
ಮುಂದಿನ ಐದು ವರ್ಷಗಳ ಬಳಿಕ ಮತ್ತೊಂದು ಯಾತ್ರೆ ಕೈಗೊಳ್ಳಿ. ಆಗ ದೆಹಲಿ ಅಥವಾ ಇಟಲಿಯಿಂದ ನೇರ ಮೈಸೂರಿಗೆ ಬಂದು ಲ್ಯಾಂಡ್ ಆಗಬಹುದು. ಇನ್ನು ಕಾಂಗ್ರೆಸ್ ಗೆ 25 ವರ್ಷ ಭವಿಷ್ಯವಿಲ್ಲ, ಅಲ್ಲಿವರೆಗೆ ಬಿಜೆಪಿ ಸರ್ಕಾರ ಇರುತ್ತೆ. ಜೀಸಸ್ ಒಬ್ಬನೇ ದೇವರು ಎನ್ನುವವನು ಪಾದ್ರಿಯನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದ್ದು, ಇದರಿಂದ ನಿಮ್ಮ ಉದ್ದೇಶ ಏನು ಎಂಬುದು ಗೊತ್ತಾಗಿದೆ. ‘ದಸರಾ ಹೊಸ್ತಿಲಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿದ್ದು, ನೀವು ಬರುವ ನಂಜನಗೂಡು ಹೆದ್ದಾರಿ ಮೋದಿ ಕಾಲದಲ್ಲಿ ನಿರ್ಮಾಣವಾಗಿದ್ದು. ಹಾಗೆಯೇ ಬರುವಾಗ ಮೈಸೂರು ಏರ್ಪೋರ್ಟ್ ನೋಡಿಕೊಂಡು ಬನ್ನಿ. ಮೈಸೂರು – ಬೆಂಗಳೂರು ಹೆದ್ದಾರಿ ಸಾಕಷ್ಟು ಅಭಿವೃದ್ಧಿ ಆಗಿದ್ದು, ಮೋದಿ ಸರ್ಕಾರ ಹೇಗೆ ಭಾರತವನ್ನು ಜೋಡಿಸಿದೆ ಎಂಬುದನ್ನು ನೋಡಿಕೊಂಡು ಹೋಗಿ ಎಂದರು.ಪಾದ್ರಿಯನ್ನು ಬದಿಗಿಟ್ಟು ಚಾಮುಂಡಿಗೆ ನಮಸ್ಕರಿಸಿ, ನಾಡಹಬ್ಬ ದಸರಾದಲ್ಲಿ ಭಾಗಿಯಾಗಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…