ಮೈಸೂರು

ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಚೆ ಇರಲಿಲ್ಲ. ಆದರೆ, ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದರು.

ಇನ್ನು, ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದರು.

andolana

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

51 mins ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

5 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

5 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

6 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

6 hours ago