ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಚೆ ಇರಲಿಲ್ಲ. ಆದರೆ, ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದರು.
ಇನ್ನು, ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದರು.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…