ಮೈಸೂರು

ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಚೆ ಇರಲಿಲ್ಲ. ಆದರೆ, ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದರು.

ಇನ್ನು, ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago