ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಚೆ ಇರಲಿಲ್ಲ. ಆದರೆ, ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದರು.
ಇನ್ನು, ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…