yaduveer
ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆಯ ಸಮಯದಲ್ಲಿ ಕುಟುಂಬಗಳು ಪ್ರವಾಸ ಸೇರಿದಂತೆ ನಾನಾ ಕಾರಣಗಳಿಗೆ ಮನೆಯಿಂದ ಹೊರಗೆ ಹೋಗುವು ದರಿಂದ ಅವರು ಗಣತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಿದ್ದರೂ ರಾಜ್ಯ ಸರ್ಕಾರ ರಜಾ ದಿನಗಳಲ್ಲಿ ಜಾತಿ ಗಣತಿಯನ್ನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ, ಗಣತಿಗಾರರಿಗೆ ಸರಿಯಾದ ತರಬೇತಿ ನೀಡದೆ ತರಾತುರಿಯಲ್ಲಿ ಗಣತಿ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.
ಈ ಹಿಂದೆ ರಾಜ್ಯ ಸರ್ಕಾರವು ಪಕ್ಷದ ಕೇಂದ್ರ ನಾಯಕರ ಒತ್ತಡದಿಂದ ಕೋಟ್ಯಂತರ ರೂ. ವ್ಯಯಿಸಿ ಕೈಗೊಳ್ಳಲಾದ ಕಾಂತರಾಜು ಮತ್ತು ಕೆ.ಜಯಪ್ರಕಾಶ್ ಹೆಗ್ಡೆ ವರದಿಗಳನ್ನು ತಿರಸ್ಕರಿಸಿತು. ತನ್ಮೂಲಕ ಜನರ ತೆರಿಗೆ ಹಣವನ್ನು ವ್ಯರ್ಥವಾಗಿ ಖರ್ಚು ಮಾಡಿದ್ದಲ್ಲದೇ ಈಗ ಮತ್ತೊಮ್ಮೆ ಜಾತಿಗಣತಿ ಕೈಗೊಳ್ಳುವ ಮೂಲಕ ಮತ್ತಷ್ಟು ದುಂದುವೆಚ್ಚ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ಯನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಂಡವಾಳ ವೆಚ್ಚವು ಶೂನ್ಯಕ್ಕೆ ಇಳಿದಿದೆ. ರಾಜ್ಯ ಸರ್ಕಾರದ ಖಜಾನೆ ಶೂನ್ಯವಾಗಿದೆ ಎಂದು ಟೀಕಿಸಿದರು.
ಬಿಜೆಪಿಯು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಾಜ್ಯ ಸರ್ಕಾರದ ಅವೈeನಿಕ ಜಾತಿ ಸಮೀಕ್ಷೆಯನ್ನು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ವಿರೋಧಿಸುತ್ತದೆ ಎಂದರು. ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿದರು. ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮಹಾಪೌರ ಶಿವಕುಮಾರ್ ಹಾಗೂ ಇತರ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…