yaduveer
ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆಯ ಸಮಯದಲ್ಲಿ ಕುಟುಂಬಗಳು ಪ್ರವಾಸ ಸೇರಿದಂತೆ ನಾನಾ ಕಾರಣಗಳಿಗೆ ಮನೆಯಿಂದ ಹೊರಗೆ ಹೋಗುವು ದರಿಂದ ಅವರು ಗಣತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಿದ್ದರೂ ರಾಜ್ಯ ಸರ್ಕಾರ ರಜಾ ದಿನಗಳಲ್ಲಿ ಜಾತಿ ಗಣತಿಯನ್ನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ, ಗಣತಿಗಾರರಿಗೆ ಸರಿಯಾದ ತರಬೇತಿ ನೀಡದೆ ತರಾತುರಿಯಲ್ಲಿ ಗಣತಿ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.
ಈ ಹಿಂದೆ ರಾಜ್ಯ ಸರ್ಕಾರವು ಪಕ್ಷದ ಕೇಂದ್ರ ನಾಯಕರ ಒತ್ತಡದಿಂದ ಕೋಟ್ಯಂತರ ರೂ. ವ್ಯಯಿಸಿ ಕೈಗೊಳ್ಳಲಾದ ಕಾಂತರಾಜು ಮತ್ತು ಕೆ.ಜಯಪ್ರಕಾಶ್ ಹೆಗ್ಡೆ ವರದಿಗಳನ್ನು ತಿರಸ್ಕರಿಸಿತು. ತನ್ಮೂಲಕ ಜನರ ತೆರಿಗೆ ಹಣವನ್ನು ವ್ಯರ್ಥವಾಗಿ ಖರ್ಚು ಮಾಡಿದ್ದಲ್ಲದೇ ಈಗ ಮತ್ತೊಮ್ಮೆ ಜಾತಿಗಣತಿ ಕೈಗೊಳ್ಳುವ ಮೂಲಕ ಮತ್ತಷ್ಟು ದುಂದುವೆಚ್ಚ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ಯನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಂಡವಾಳ ವೆಚ್ಚವು ಶೂನ್ಯಕ್ಕೆ ಇಳಿದಿದೆ. ರಾಜ್ಯ ಸರ್ಕಾರದ ಖಜಾನೆ ಶೂನ್ಯವಾಗಿದೆ ಎಂದು ಟೀಕಿಸಿದರು.
ಬಿಜೆಪಿಯು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಾಜ್ಯ ಸರ್ಕಾರದ ಅವೈeನಿಕ ಜಾತಿ ಸಮೀಕ್ಷೆಯನ್ನು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ವಿರೋಧಿಸುತ್ತದೆ ಎಂದರು. ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿದರು. ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮಹಾಪೌರ ಶಿವಕುಮಾರ್ ಹಾಗೂ ಇತರ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…
ಜೆರುಸಲೆಮ್ : ಇಸ್ರೇಲ್ನ ಸೇನಾ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…