ಮೈಸೂರು

ಜಾತಿಗಣತಿ ಕೈಬಿಡಲು ಸಂಸದ ಯದುವೀರ್‌ ಆಗ್ರಹ

ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆಯ ಸಮಯದಲ್ಲಿ ಕುಟುಂಬಗಳು ಪ್ರವಾಸ ಸೇರಿದಂತೆ ನಾನಾ ಕಾರಣಗಳಿಗೆ ಮನೆಯಿಂದ ಹೊರಗೆ ಹೋಗುವು ದರಿಂದ ಅವರು ಗಣತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಿದ್ದರೂ ರಾಜ್ಯ ಸರ್ಕಾರ ರಜಾ ದಿನಗಳಲ್ಲಿ ಜಾತಿ ಗಣತಿಯನ್ನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ, ಗಣತಿಗಾರರಿಗೆ ಸರಿಯಾದ ತರಬೇತಿ ನೀಡದೆ ತರಾತುರಿಯಲ್ಲಿ ಗಣತಿ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.

ಈ ಹಿಂದೆ ರಾಜ್ಯ ಸರ್ಕಾರವು ಪಕ್ಷದ ಕೇಂದ್ರ ನಾಯಕರ ಒತ್ತಡದಿಂದ ಕೋಟ್ಯಂತರ ರೂ. ವ್ಯಯಿಸಿ ಕೈಗೊಳ್ಳಲಾದ ಕಾಂತರಾಜು ಮತ್ತು ಕೆ.ಜಯಪ್ರಕಾಶ್ ಹೆಗ್ಡೆ ವರದಿಗಳನ್ನು ತಿರಸ್ಕರಿಸಿತು. ತನ್ಮೂಲಕ ಜನರ ತೆರಿಗೆ ಹಣವನ್ನು ವ್ಯರ್ಥವಾಗಿ ಖರ್ಚು ಮಾಡಿದ್ದಲ್ಲದೇ ಈಗ ಮತ್ತೊಮ್ಮೆ ಜಾತಿಗಣತಿ ಕೈಗೊಳ್ಳುವ ಮೂಲಕ ಮತ್ತಷ್ಟು ದುಂದುವೆಚ್ಚ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ಯನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಂಡವಾಳ ವೆಚ್ಚವು ಶೂನ್ಯಕ್ಕೆ ಇಳಿದಿದೆ. ರಾಜ್ಯ ಸರ್ಕಾರದ ಖಜಾನೆ ಶೂನ್ಯವಾಗಿದೆ ಎಂದು ಟೀಕಿಸಿದರು.

ಬಿಜೆಪಿಯು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಾಜ್ಯ ಸರ್ಕಾರದ ಅವೈeನಿಕ ಜಾತಿ ಸಮೀಕ್ಷೆಯನ್ನು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ವಿರೋಧಿಸುತ್ತದೆ ಎಂದರು. ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿದರು. ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮಹಾಪೌರ ಶಿವಕುಮಾರ್ ಹಾಗೂ ಇತರ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

14 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

15 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

15 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

20 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

21 hours ago