ಮೈಸೂರು

ಜಾತಿಗಣತಿ ಕೈಬಿಡಲು ಸಂಸದ ಯದುವೀರ್‌ ಆಗ್ರಹ

ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆಯ ಸಮಯದಲ್ಲಿ ಕುಟುಂಬಗಳು ಪ್ರವಾಸ ಸೇರಿದಂತೆ ನಾನಾ ಕಾರಣಗಳಿಗೆ ಮನೆಯಿಂದ ಹೊರಗೆ ಹೋಗುವು ದರಿಂದ ಅವರು ಗಣತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಿದ್ದರೂ ರಾಜ್ಯ ಸರ್ಕಾರ ರಜಾ ದಿನಗಳಲ್ಲಿ ಜಾತಿ ಗಣತಿಯನ್ನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ, ಗಣತಿಗಾರರಿಗೆ ಸರಿಯಾದ ತರಬೇತಿ ನೀಡದೆ ತರಾತುರಿಯಲ್ಲಿ ಗಣತಿ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.

ಈ ಹಿಂದೆ ರಾಜ್ಯ ಸರ್ಕಾರವು ಪಕ್ಷದ ಕೇಂದ್ರ ನಾಯಕರ ಒತ್ತಡದಿಂದ ಕೋಟ್ಯಂತರ ರೂ. ವ್ಯಯಿಸಿ ಕೈಗೊಳ್ಳಲಾದ ಕಾಂತರಾಜು ಮತ್ತು ಕೆ.ಜಯಪ್ರಕಾಶ್ ಹೆಗ್ಡೆ ವರದಿಗಳನ್ನು ತಿರಸ್ಕರಿಸಿತು. ತನ್ಮೂಲಕ ಜನರ ತೆರಿಗೆ ಹಣವನ್ನು ವ್ಯರ್ಥವಾಗಿ ಖರ್ಚು ಮಾಡಿದ್ದಲ್ಲದೇ ಈಗ ಮತ್ತೊಮ್ಮೆ ಜಾತಿಗಣತಿ ಕೈಗೊಳ್ಳುವ ಮೂಲಕ ಮತ್ತಷ್ಟು ದುಂದುವೆಚ್ಚ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿ ಗಣತಿ ಯನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಂಡವಾಳ ವೆಚ್ಚವು ಶೂನ್ಯಕ್ಕೆ ಇಳಿದಿದೆ. ರಾಜ್ಯ ಸರ್ಕಾರದ ಖಜಾನೆ ಶೂನ್ಯವಾಗಿದೆ ಎಂದು ಟೀಕಿಸಿದರು.

ಬಿಜೆಪಿಯು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಾಜ್ಯ ಸರ್ಕಾರದ ಅವೈeನಿಕ ಜಾತಿ ಸಮೀಕ್ಷೆಯನ್ನು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ವಿರೋಧಿಸುತ್ತದೆ ಎಂದರು. ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿದರು. ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮಹಾಪೌರ ಶಿವಕುಮಾರ್ ಹಾಗೂ ಇತರ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

2 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

4 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

10 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

10 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

10 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

10 hours ago