ಮೈಸೂರು

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಯದುವೀರ್‌ ಪ್ರತಿಕ್ರಿಯೆ

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ. ಇದರಿಂದ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಬರಲಿದೆ ಎಂದರು.

ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

5 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

40 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

3 hours ago