ಮೈಸೂರು

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಯದುವೀರ್‌ ಪ್ರತಿಕ್ರಿಯೆ

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ. ಇದರಿಂದ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಬರಲಿದೆ ಎಂದರು.

ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago