ಮೈಸೂರು

ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ ಹೆಚ್ಚುವರಿ ಬೋಗಿ: ಸಂಸದ ಯದುವೀರ್‌

ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದ್ದು, ಇದಕ್ಕೆ ಒಪ್ಪಿಗೆಯನ್ನು ಸೂಚಿಸಿದೆ.

ಉತ್ತರ ಪ್ರದೇಶದ ಧಾರ್ಮಿಕ ನಗರಿ ಪ್ರಯಾಗರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳಕ್ಕೆ ಮೈಸೂರು-ಕೊಡಗು ಕ್ಷೇತ್ರದಿಂದ ತೆರಳುವ ಯಾತ್ರಿಗಳಿಗೆ ನೆರವಾಗಲೆಂದು ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು ಎಂದು ರೈಲ್ವೆ ಇಲಾಖೆಗೆ ಸಂಸದ ಯದುವೀರ್ ಪತ್ರ ಬರೆದು ಮನವಿ ಮಾಡಿದ್ದರು.

ಯದುವೀರ್‌ ಅವರು ಬರೆದ ಪತ್ರದಲ್ಲಿ ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲು ಪ್ರಯಾಗರಾಜ್ ಮೂಲಕ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ಅನುಕೂಲವಾಗುತ್ತದೆ. ಹೀಗಾಗಿ ಹೆಚ್ಚುವರಿ ಕೋಚ್ ಅನ್ನು ಅಳವಡಿಸಬೇಕು ಎಂದು ಉಲ್ಲೇಖಿಸಿದ್ದರು.

ಈ ಪತ್ರಕ್ಕೆ ಸಕಾರತ್ಮಕವಾಗಿ ಸ್ಪಂದಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು, ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ ಹೆಚ್ಚುವರಿ ಬೋಗಿಯನ್ನು ಅಳವಡಿಸಲು ಸಮ್ಮತಿಸಿದೆ. ಅಲ್ಲದೇ ಹವಾನಿಯಂತ್ರಿತ ಕೋಚ್ ಅನ್ನು ಅಳವಡಿಸಲಾಗುವುದು. ಹೀಗಾಗಿ ಫೆಬ್ರವರಿ 4ರಿಂದ ಮೈಸೂರು ವಾರಾಣಸಿ ಎಕ್ಸೆಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿಯ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಂಸದ ಯದುವೀರ್ ಪ್ರತಿಕ್ರಿಯೆ

ಈ ಕುರಿತು ಇಂದು(ಫೆಬ್ರವರಿ.3) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್ ಅವರು, ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಸಂಗಮವಾಗಿದೆ. ಈ ಪುಣ್ಯ ಕಾಲದಲ್ಲಿ ತೀರ್ಥ ಸ್ನಾನ ಮಾಡಲು ಹಲವಾರು ಮಂದಿ ಇಚ್ಛಿಸಿರುತ್ತಾರೆ. ನಮ್ಮ ಕ್ಷೇತ್ರದ ಜನರಿಗೆ ಅನುಕೂಲವಾಗಲೆಂದು ರೈಲ್ವೆ ಇಲಾಖೆಗೆ ಪತ್ರೆ ಬರೆದಿದ್ದೆ ಎಂದು ತಿಳಿಸಿದರು.

ಈಗಾಗಲೇ ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲು ಸಂಚರಿಸುತ್ತಿದೆ. ಇದಕ್ಕೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ನಮ್ಮ ಕ್ಷೇತ್ರದಿಂದ ಯಾತ್ರಿಗಳಿಗೆ ಅನುಕೂಲವಾಗಲಿದೆ ಎಂಬ ಆಲೋಚನೆ ಬಂದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪತ್ರ ಬರೆದು ಮನವಿ ಸಲ್ಲಿಸಿದ್ದೆ. ಅದಕ್ಕೆ ಇಲಾಖೆಯಿಂದ ಸ್ಪಂದನೆ ಬಂದು ಫೆಬ್ರವರಿಯಿಂದ ಹೆಚ್ಚುವರಿ ಬೋಗಿಗಳ ಸಂಚಾರ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ನಮ್ಮ ಕ್ಷೇತ್ರದ ಜನರಿಗೆ ಮಹಾಕುಂಭ ಮೇಳದ ಕೊಡುಗೆಯಾಗಿದೆ. ಹೀಗಾಗಿ ಹೆಚ್ಚುವರಿ ಬೋಗಿಗಳ ಸಂಚಾರಕ್ಕೆ ಅವಕಾಶ ನೀಡಿರುವ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

7 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

8 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

8 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

8 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

8 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

8 hours ago