ಮೈಸೂರು

ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ ಹೆಚ್ಚುವರಿ ಬೋಗಿ: ಸಂಸದ ಯದುವೀರ್‌

ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದ್ದು, ಇದಕ್ಕೆ ಒಪ್ಪಿಗೆಯನ್ನು ಸೂಚಿಸಿದೆ.

ಉತ್ತರ ಪ್ರದೇಶದ ಧಾರ್ಮಿಕ ನಗರಿ ಪ್ರಯಾಗರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳಕ್ಕೆ ಮೈಸೂರು-ಕೊಡಗು ಕ್ಷೇತ್ರದಿಂದ ತೆರಳುವ ಯಾತ್ರಿಗಳಿಗೆ ನೆರವಾಗಲೆಂದು ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು ಎಂದು ರೈಲ್ವೆ ಇಲಾಖೆಗೆ ಸಂಸದ ಯದುವೀರ್ ಪತ್ರ ಬರೆದು ಮನವಿ ಮಾಡಿದ್ದರು.

ಯದುವೀರ್‌ ಅವರು ಬರೆದ ಪತ್ರದಲ್ಲಿ ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲು ಪ್ರಯಾಗರಾಜ್ ಮೂಲಕ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ಅನುಕೂಲವಾಗುತ್ತದೆ. ಹೀಗಾಗಿ ಹೆಚ್ಚುವರಿ ಕೋಚ್ ಅನ್ನು ಅಳವಡಿಸಬೇಕು ಎಂದು ಉಲ್ಲೇಖಿಸಿದ್ದರು.

ಈ ಪತ್ರಕ್ಕೆ ಸಕಾರತ್ಮಕವಾಗಿ ಸ್ಪಂದಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು, ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ ಹೆಚ್ಚುವರಿ ಬೋಗಿಯನ್ನು ಅಳವಡಿಸಲು ಸಮ್ಮತಿಸಿದೆ. ಅಲ್ಲದೇ ಹವಾನಿಯಂತ್ರಿತ ಕೋಚ್ ಅನ್ನು ಅಳವಡಿಸಲಾಗುವುದು. ಹೀಗಾಗಿ ಫೆಬ್ರವರಿ 4ರಿಂದ ಮೈಸೂರು ವಾರಾಣಸಿ ಎಕ್ಸೆಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿಯ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಂಸದ ಯದುವೀರ್ ಪ್ರತಿಕ್ರಿಯೆ

ಈ ಕುರಿತು ಇಂದು(ಫೆಬ್ರವರಿ.3) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್ ಅವರು, ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಸಂಗಮವಾಗಿದೆ. ಈ ಪುಣ್ಯ ಕಾಲದಲ್ಲಿ ತೀರ್ಥ ಸ್ನಾನ ಮಾಡಲು ಹಲವಾರು ಮಂದಿ ಇಚ್ಛಿಸಿರುತ್ತಾರೆ. ನಮ್ಮ ಕ್ಷೇತ್ರದ ಜನರಿಗೆ ಅನುಕೂಲವಾಗಲೆಂದು ರೈಲ್ವೆ ಇಲಾಖೆಗೆ ಪತ್ರೆ ಬರೆದಿದ್ದೆ ಎಂದು ತಿಳಿಸಿದರು.

ಈಗಾಗಲೇ ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲು ಸಂಚರಿಸುತ್ತಿದೆ. ಇದಕ್ಕೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ನಮ್ಮ ಕ್ಷೇತ್ರದಿಂದ ಯಾತ್ರಿಗಳಿಗೆ ಅನುಕೂಲವಾಗಲಿದೆ ಎಂಬ ಆಲೋಚನೆ ಬಂದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪತ್ರ ಬರೆದು ಮನವಿ ಸಲ್ಲಿಸಿದ್ದೆ. ಅದಕ್ಕೆ ಇಲಾಖೆಯಿಂದ ಸ್ಪಂದನೆ ಬಂದು ಫೆಬ್ರವರಿಯಿಂದ ಹೆಚ್ಚುವರಿ ಬೋಗಿಗಳ ಸಂಚಾರ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ನಮ್ಮ ಕ್ಷೇತ್ರದ ಜನರಿಗೆ ಮಹಾಕುಂಭ ಮೇಳದ ಕೊಡುಗೆಯಾಗಿದೆ. ಹೀಗಾಗಿ ಹೆಚ್ಚುವರಿ ಬೋಗಿಗಳ ಸಂಚಾರಕ್ಕೆ ಅವಕಾಶ ನೀಡಿರುವ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

12 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

12 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

16 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

21 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

21 hours ago