ಮೈಸೂರು

ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ದ್ವಿಮುಖ ನಿಲುವು: ಯದುವೀರ್‌ ಒಡೆಯರ್

ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು(ಡಿ.4) ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರದ ಮೂಲಕ ರಾತ್ರಿ ಪ್ರಯಾಣ ನಿರ್ಬಂಧವನ್ನು ನಿಷೇದಿಸುವ ವಿಚಾರದ ಬಗ್ಗೆ ನೀಡಿರುವ ಇತ್ತೀಚಿನ ಹೇಳಿಕೆ ಕಾಂಗ್ರೆಸ್ ನಾಯಕತ್ವದಲ್ಲಿನ ಭಿನ್ನಾಭಿಪ್ರಾಯವನ್ನು ತೋರುತ್ತದೆ ಎಂದಿದ್ದಾರೆ.

ಒಂದು ಕಡೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದಿಷ್ಟವಾಗಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ನಿರಾಕರಿಸುತ್ತಾರೆ. ಇನ್ನೊಂದು ಕಡೆ, ಪಕ್ಷದ ರಾಷ್ಟೀಯ ನಾಯಕರು ಅದಕ್ಕೆ ವಿರುದ್ಧವಾಗಿ ಸೂಚನೆ ನೀಡುತ್ತಿದ್ದಾರೆ. ಈ ಅಸಮನ್ವಯತೆ ಅವರ ಆಡಳಿತದ ಪ್ರಾಮಾಣಿಕತೆಯ ಬಗ್ಗೆ ಸಂದೇಹಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ.

ಮೇಲಾಗಿ, ಈ ಪ್ರಸ್ತಾಪಗಳು ನಮ್ಮ ದೇಶದ ಪರಿಸರ ವ್ಯವಸ್ಥೆಗಳ ಸಂರಕ್ಷಣೆಯ ಬಗ್ಗೆ ಚಿಂತೆಯನ್ನೂ ತೋರುತ್ತವೆ. ಬಂಡೀಪುರವು ಕೇವಲ ಒಂದು ರಸ್ತೆ ಅಲ್ಲ—ಇದು ಅನೇಕ ವನ್ಯಜೀವಿ ಪ್ರಭೇಧಗಳ ವಾಸಸ್ಥಳವಾಗಿದೆ. ಅವುಗಳನ್ನು ಮಾನವ ಚಟುವಟಿಕೆಗಳಿಂದ ರಕ್ಷಿಸಲು, ವಿಶೇಷವಾಗಿ ರಾತ್ರಿ ಸಮಯದಲ್ಲಿ, ಸೂಕ್ಷ್ಮ ಅವಧಿಯಲ್ಲಿ ಅವುಗಳಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರು ಈ ದೇಶದ ಪ್ರಕೃತಿ ಸಂರಕ್ಷಣೆಗೆ ಪ್ರಜ್ಞಾಪೂರ್ವಕವಾಗಿರುವುದನ್ನು ನಿರ್ಧರಿಸಬೇಕೇ ಹೊರತು, ತಮ್ಮ ಪ್ರಣಾಳಿಕೆಯು ಕೆಲವೊಬ್ಬರಿಗೆ ಲಾಭವನ್ನು ತರುವಂತೆ ಮಾಡಿರುವುದರಿಂದ ಈ ರೀತಿಯ ನಿರ್ಭಂಧವನ್ನು ಹಿಂಪಡೆದು ಪರಿಸರ ಹಾಗೂ ವನ್ಯಜೀವಿಗಳ ಸರ್ವನಾಶ ಮಾಡುವುದು ಸರಿಯಲ್ಲ. ಇದರಿಂದ ಸಂಭವಿಸಬಹುದಾದ ಹಾನಿಯ ಬಗ್ಗೆಯು ಸಹ ಚಿಂತಿಸಬೇಕಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಅವಶ್ಯಕವಾದದ್ದು ಏನೆಂದರೆ, ಒಂದೇ ಧ್ವನಿಯಲ್ಲಿ ಮಾತನಾಡುವ, ನಾಡಿನ ಜನತೆ ಮತ್ತು ಪರಿಸರದ ಹಿತದೃಷ್ಠಿಯಿಂದ ಕ್ರಮಗಳನ್ನೂ ತೆಗೆದುಕೊಳ್ಳುವ ಬಲಿಷ್ಠ ಸರ್ಕಾರ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

5 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

28 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

43 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago