ಮೈಸೂರು

ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ದ್ವಿಮುಖ ನಿಲುವು: ಯದುವೀರ್‌ ಒಡೆಯರ್

ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಇಂದು(ಡಿ.4) ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಂಡೀಪುರದ ಮೂಲಕ ರಾತ್ರಿ ಪ್ರಯಾಣ ನಿರ್ಬಂಧವನ್ನು ನಿಷೇದಿಸುವ ವಿಚಾರದ ಬಗ್ಗೆ ನೀಡಿರುವ ಇತ್ತೀಚಿನ ಹೇಳಿಕೆ ಕಾಂಗ್ರೆಸ್ ನಾಯಕತ್ವದಲ್ಲಿನ ಭಿನ್ನಾಭಿಪ್ರಾಯವನ್ನು ತೋರುತ್ತದೆ ಎಂದಿದ್ದಾರೆ.

ಒಂದು ಕಡೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದಿಷ್ಟವಾಗಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ನಿರಾಕರಿಸುತ್ತಾರೆ. ಇನ್ನೊಂದು ಕಡೆ, ಪಕ್ಷದ ರಾಷ್ಟೀಯ ನಾಯಕರು ಅದಕ್ಕೆ ವಿರುದ್ಧವಾಗಿ ಸೂಚನೆ ನೀಡುತ್ತಿದ್ದಾರೆ. ಈ ಅಸಮನ್ವಯತೆ ಅವರ ಆಡಳಿತದ ಪ್ರಾಮಾಣಿಕತೆಯ ಬಗ್ಗೆ ಸಂದೇಹಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ.

ಮೇಲಾಗಿ, ಈ ಪ್ರಸ್ತಾಪಗಳು ನಮ್ಮ ದೇಶದ ಪರಿಸರ ವ್ಯವಸ್ಥೆಗಳ ಸಂರಕ್ಷಣೆಯ ಬಗ್ಗೆ ಚಿಂತೆಯನ್ನೂ ತೋರುತ್ತವೆ. ಬಂಡೀಪುರವು ಕೇವಲ ಒಂದು ರಸ್ತೆ ಅಲ್ಲ—ಇದು ಅನೇಕ ವನ್ಯಜೀವಿ ಪ್ರಭೇಧಗಳ ವಾಸಸ್ಥಳವಾಗಿದೆ. ಅವುಗಳನ್ನು ಮಾನವ ಚಟುವಟಿಕೆಗಳಿಂದ ರಕ್ಷಿಸಲು, ವಿಶೇಷವಾಗಿ ರಾತ್ರಿ ಸಮಯದಲ್ಲಿ, ಸೂಕ್ಷ್ಮ ಅವಧಿಯಲ್ಲಿ ಅವುಗಳಿಗೆ ರಕ್ಷಣೆ ನೀಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರು ಈ ದೇಶದ ಪ್ರಕೃತಿ ಸಂರಕ್ಷಣೆಗೆ ಪ್ರಜ್ಞಾಪೂರ್ವಕವಾಗಿರುವುದನ್ನು ನಿರ್ಧರಿಸಬೇಕೇ ಹೊರತು, ತಮ್ಮ ಪ್ರಣಾಳಿಕೆಯು ಕೆಲವೊಬ್ಬರಿಗೆ ಲಾಭವನ್ನು ತರುವಂತೆ ಮಾಡಿರುವುದರಿಂದ ಈ ರೀತಿಯ ನಿರ್ಭಂಧವನ್ನು ಹಿಂಪಡೆದು ಪರಿಸರ ಹಾಗೂ ವನ್ಯಜೀವಿಗಳ ಸರ್ವನಾಶ ಮಾಡುವುದು ಸರಿಯಲ್ಲ. ಇದರಿಂದ ಸಂಭವಿಸಬಹುದಾದ ಹಾನಿಯ ಬಗ್ಗೆಯು ಸಹ ಚಿಂತಿಸಬೇಕಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಅವಶ್ಯಕವಾದದ್ದು ಏನೆಂದರೆ, ಒಂದೇ ಧ್ವನಿಯಲ್ಲಿ ಮಾತನಾಡುವ, ನಾಡಿನ ಜನತೆ ಮತ್ತು ಪರಿಸರದ ಹಿತದೃಷ್ಠಿಯಿಂದ ಕ್ರಮಗಳನ್ನೂ ತೆಗೆದುಕೊಳ್ಳುವ ಬಲಿಷ್ಠ ಸರ್ಕಾರ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

14 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

14 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago